Posts

Showing posts from July, 2023

ಬಾಲ್ಕನಿಯಲೊಂದು ಸಸಿ

Image
        ಮೊಗ್ಗುಗಳು ಯಾವಾಗ ಅರಳುತ್ತವೆ ಎಂದು ಕಾಯುತ್ತಿದ್ದಾಳೆ ಹೂ ಅರಳಿದ ಖುಷಿ ಹೂಗಳಿರುವ ಕ್ಲಿಪ್ ನ ಜೊತೆ ಸೇವಂತಿಗೆ ಹೂ ಜೊತೆಗೆ ಹಣೆಯಲ್ಲಿ ಹೂವಿನ ಬೊಟ್ಟು ಅಪಾರ್ಟ್ಮೆಂಟಿನ ಹೂ ಗಿಡಗಳ ಜೊತೆ ಮಾತು-ಕಥೆ                ಮೊದಲಿಂದಲೂ ಮಗಳಿಗೆ ಗಿಡಗಳೆಂದರೆ ಬಹಳ ಪ್ರೀತಿ. ಅವತಾರ್ ಮೂವಿಯನ್ನು ನೋಡಿದ ಮೇಲಂತೂ ಅವರು ಗಿಡಗಳನ್ನು ಸ್ಪರ್ಶಿಸುವಂತೆ ಇವಳೂ ಕೂಡ ಗಿಡಗಳ ಎಲೆಗಳನ್ನು, ಹೂಗಳನ್ನು ಸ್ಪರ್ಶಿಸಿ ಖುಷಿ ಪಡುತ್ತಿದ್ದಳು. ನಾವಿರುವ ವಸತಿ ಸಮುಚ್ಚಯದಲ್ಲಿ ಹೆಚ್ಚಿನ ಎಲ್ಲಾ ಮನೆಗಳ ಬಾಲ್ಕನಿಯಲ್ಲಿರುವ ಗಿಡಗಳನ್ನು ನೋಡಿ "ನಾವು ಯಾವಾಗ ಹೀಗೆ ಗಿಡಗಳನ್ನು ನೆಡುವುದು?" ಎಂದು ಪ್ರಶ್ನಿಸತೊಡಗಿದಳು. "ನಾವು ವಾರಾಂತ್ಯದಲ್ಲಿ ಅಜ್ಜ ಅಜ್ಜಿಯನ್ನು ನೋಡಲು ಮನೆಗೆ ಹೋದಾಗ ಅವುಗಳಿಗೆ ನೀರು ಹಾಕುವುದು ಯಾರು? ಹಾಗಾಗಿ ಇಲ್ಲಿ ಗಿಡಗಳನ್ನು ನೆಡುವುದು ಬೇಡ" ಎಂದು ನಾನು ನಿರಾಕರಿಸಿದೆ. ನಾನು ಹಾಗೆ ಹೇಳಿದ್ದು ಅದೆಷ್ಟು ಅರ್ಥವಾಯಿತೋ ಗೊತ್ತಿಲ್ಲ. ಆಮೇಲೆ ಅವಳು ಪುನಃ ಗಿಡ ನೆಡುವುದರ ಬಗ್ಗೆ ಕೇಳಲಿಲ್ಲ. ಆದರೆ ಊರಿಗೆ ಹೋದಾಗಲೆಲ್ಲಾ ಅಜ್ಜಿಯ ಜೊತೆ ಹೂ ಗಿಡಗಳನ್ನು ನೆಡುವುದು, ಅವುಗಳಿಗೆ ನೀರನ್ನು ಹಾಕುವುದು ಅವಳ ಇಷ್ಟದ ಕೆಲಸವಾಗಿತ್ತು. ಅಲ್ಲದೇ ಹೂಗಳನ್ನು ಕೊಯಿದು ನಾವಿಬ್ಬರೂ ಒಟ್ಟಿಗೆ ಕೂತು ತಯಾರಿಸಿದ ಪೇಪರ್ ಕಪ...

ಸ್ವಾತಂತ್ರ್ಯಾನಂತರ ಮಕ್ಕಳ ಸವಲತ್ತುಗಳಲ್ಲಿ ಉಂಟಾದ ಅಭಿವೃದ್ಧಿ

Image
    (ಆಕಾಶವಾಣಿ ಮಂಗಳೂರಿನಿಂದ ಪ್ರಸಾರವಾದ ಲೇಖನ)                " ಇಂದಿನ ಮಕ್ಕಳೇ ನಾಳಿನ ಪ್ರಜೆಗಳು" ಎಂಬ ಮಾತಿನಂತೆ ಮಕ್ಕಳು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸುದೃಢರಾಗಿದ್ದರಷ್ಟೇ ಒಂದು ಉತ್ತಮ ಸಮಾಜವನ್ನು ನಿರ್ಮಿಸಲು ಸಾಧ್ಯ. ಅನಾರೋಗ್ಯ ಹಾಗೂ ಶಿಕ್ಷಣ ವಂಚಿತ ಮಕ್ಕಳಿಂದಾಗಿ ಒಂದಿಡೀ ತಲೆಮಾರು, ಅದರಿಂದಾಗಿ ಒಂದು ದೇಶವೇ ಅಭಿವೃದ್ಧಿಯಿಂದ ಹಿಂದುಳಿಯುವಂತಾಗುತ್ತದೆ. ಸ್ವಾತಂತ್ರ್ಯಾ ನಂತರ, ಮಕ್ಕಳ ಸರ್ವತೋಮುಖ ಬೆಳವಣಿಗೆ ಸರ್ಕಾರವು ಹಲವಾರು ಸವಲತ್ತುಗಳನ್ನು ಹಾಗೂ ಯೋಜನೆಗಳನ್ನು ರೂಪಿಸಿವೆ. ಕಾಲ ಕಾಲಕ್ಕೆ ಮಕ್ಕಳ ಸವಲತ್ತುಗಳಲ್ಲಿ ಬದಲಾವಣೆಗಳಾಗಿವೆ. ಅವುಗಳ ಬಗ್ಗೆ ಇಂದು ತಿಳಿದುಕೊಳ್ಳೋಣ.               ಸ್ವಾತಂತ್ರ್ಯಾ ಪೂರ್ವದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಅಧಿಕವಾಗಿತ್ತು. ಭಾರತದಲ್ಲಿ ಈ ಹಿಂದೆ ಹುಟ್ಟಿದ ಒಂದು ವರ್ಷದೊಳಗೆ ಮಕ್ಕಳು ಬೇರೆ ಬೇರೆ ಕಾರಣಗಳಿಂದ ಸಾವನ್ನಪ್ಪುತ್ತಿದ್ದರು. ತಾಯಿಯ ಅಪೌಷ್ಠಿಕತೆ, ಚಿಕ್ಕ ವಯಸ್ಸಿನಲ್ಲೇ ಮದುವೆ, ಸಮರ್ಪಕ ವೈದ್ಯಕೀಯ ಸೌಲಭ್ಯಗಳ ಕೊರತೆ, ಶಿಶುಗಳ ಕಡಿಮೆ ತೂಕ ಸೇರಿದಂತೆ ಹಲವು ಕಾರಣಗಳಿಂದ ನವಜಾತ ಶಿಶುಗಳು ಸಾವನ್ನಪ್ಪುತ್ತಿದ್ದವು. 2010ರಲ್ಲಿ ಭಾರತದಲ್ಲಿ 1000 ನವಜಾತ ಶಿಶುಗಳ ಪೈಕಿ 47 ನವಜಾತ ಶಿಶುಗಳು ಸಾವನ್ನಪ್ಪುತ್ತಿದ್ದವು. ಆದರೆ 2020ರ ವೇಳೆಗೆ ...